Friday, February 10, 2012

ಅರಿಯಲಿಲ್ಲ ಅಂತರಾಳ !!!!!


ಅಲ್ಲಿ..... ಇಲ್ಲಿ..... ಅದು.... ಇದು...
ಮನದ ಕೊಸರು...ಹಾರಿ.... ಹೀರಿ...
ಮುದದ ಕೀರೀಟ... ಮೆರೆದ ಮನ....
ಮುರಿದ ಕಿರೀಟ .... ಮುದುರಿ ಮನ....
ಕೆದರಿ ಕೋಪ..... ಅರಿಯಲ್ಲಿ ತಾಪ...
ಅರಿಯ ಅರುಹು....ಸಮರ್ಥನೆಗೆ ಕೂಗು....

ಕೂಗಿನಲ್ಲಿ ಮರೆತ ಜ್ಞಾನ ....
ಅಂತರ್ಯದಲ್ಲಿ ಕದನ ಸದನ.....
ಹಿಂದೆ ಹೊಗಳು ಭಟ್ಟರು.....
ಮುಂದೆ ತೆಗಳೋ ಭಟರು......
ಹುಮ್ಮಸ್ಸಿನ ಹಾರಾಟ....
ಮಾತಿನಲ್ಲೇ ಸೆಣಸಾಟ...
ಕಳೆದ ಶಬ್ದ..... ಬಿಟ್ಟ ಬಾಣ...
ಅರಿಯ ಶವ... ನನ್ನ ಭಾವ....
ಕೊಲೆಗಾರನ ಹಣೆಪಟ್ಟ....

ಮರೆತ ಜ್ಞಾನ.....
ಮೆರೆದ ಅಜ್ಞಾನ...
ಕದನದಲ್ಲಿ ಸತ್ತ ನನ್ನ ಆಂತರ್ಯದ ಜನ...
ಹಿಂದೆ ತಿರುಗೆ ಎಲ್ಲ ಶೂನ್ಯ....

ಹೊಗಳಿಕೆಯ ಹೆಗಲಲ್ಲಿ ಶವದ ಮೆರವಣಿಗೆ...
ತೆಗಳಿಕೆಗೆ ಕೋಪದಲ್ಲಿನ ಧಾವಂತ....
ಭಾಷೆ-ಮಾನವತೆಯಲ್ಲಿ ಮನವೇ ಅಸ್ತ೦ಗತ ....
ಪರ-ವಿರೋಧದ ಹೋರಾಟದಲ್ಲಿ...
ಕಳೆದು ಹೋದ ನಮ್ಮ ಭಾಷೆ -ಭವಣೆ....
ಕೊನೆಯಲ್ಲಿ ಅವನಿಗೂ... ನನಗೂ...
ಇಲ್ಲದ ಭೇದ...
ಹಾಗಾದ ಮೇಲೆ ಅರ್ಥ ಕಳೆದುಕೊಂಡ ಕದನ...
ಮುರಿದು ಹೋದ ಮನಗಳ ಮಸಣ...

ಅಂತರ್ಯದಲ್ಲಿ ಸಾದಿಸೆ ಭುದ್ಧ....
ಜನನ-ಮರಣಕ್ಕೆ ದಿವ್ಯ ಮೌನ....

ಶುನಕದ ಬೊಗಳಿಕೆ...
ದಿವ್ಯ ನಿರ್ಲಕ್ಷದಲ್ಲಿ ಕುಂಜರದ ನಡೆ...
ನಡೆ.. ದ್ಯಾನದೆಡೆಗೆ..
ನಿರ್ಲೀಪ್ತತೆಯಲ್ಲಿ...
ಚಿರನೂತನ ನಿರಂತರ ಚೇತನದ ಕಡೆಗೆ...